ಬೆಳಗಾವಿ:ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಶಾಲೆಗಳಲ್ಲಿ ಲಭ್ಯವಿರುವ ಕೊಠಡಿಗಳಿಗೆ ಕಡ್ಡಾಯವಾಗಿ ಸ್ಥಳಾಂತರಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದೆ.
ಶಾಸಕ ಎಸ್.ಟಿ. ಸೋಮಶೇಖರ್ ನೇತೃತ್ವದ ಸಮಿತಿ ವಿಧಾನಸಭೆಯಲ್ಲಿ ಬುಧವಾರ ವರದಿ ಮಂಡಿಸಿತು.
ಸಮಿತಿಯ ಪ್ರಮುಖ ಶಿಫಾರಸುಗಳು:
*ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮುಂದಿನ ಆರ್ಥಿಕ ವರ್ಷದಲ್ಲಿ ವೇತನ ಹೆಚ್ಚಳ ಮಾಡಬೇಕು.
*ತಾಲ್ಲೂಕುವಾರು ತರಬೇತಿ ಶಿಬಿರ ನಡೆಸಬೇಕು.
*ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಪ್ರಮಾಣವನ್ನು ಕಡ್ಡಾಯ
ವಾಗಿ ಪರಿಶೀಲಿಸಿ ಅಂಗನವಾಡಿ ಕೇಂದ್ರಗಳಿಗೆ ಖರೀದಿ ಮಾಡಬೇಕು.
*ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೀಡುತ್ತಿರುವ ಚಿಕಿತ್ಸಾ ವೆಚ್ಚದಲ್ಲಿ ಉದಾಸೀನ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು.
*ಅಂಗನವಾಡಿ ಮಕ್ಕಳಿಗೆ ಅನುಕೂಲವಾಗುವಂತೆ ಇಲಾಖೆಯಿಂದ ಆ್ಯಪ್ ಅಳವಡಿಸಲು ಹಾಗೂ ವೀಲ್ಚೇರ್ ಒದಗಿಸಲು ಕ್ರಮ ಕೈಗೊಳ್ಳಬೇಕು.
*ಅಂಗನವಾಡಿ ಸಹಾಯಕಿಯರ ನೇಮಕಾತಿಯಲ್ಲಿ ಸ್ಥಳೀಯ ಭಾಷೆ ತಿಳಿದವರಿಗೆ ಆದ್ಯತೆ ಕೊಡಬೇಕು.
*ಕಾರ್ಯಕರ್ತೆಯರು, ಸಹಾಯಕಿಯರಿಗೆ ಸೂಕ್ತ ವೈದ್ಯಕೀಯ ರಜೆ ಸೌಲಭ್ಯ ಕಲ್ಪಿಸಲು ನಿಯಮ ರಚಿಸಬೇಕು.
*ಅಂಧ ಮಹಿಳೆಯರಿಗೆ ಜನಿಸುವ ಮಕ್ಕಳ ಪಾಲನೆಗೆ ಎರಡು ವರ್ಷಗಳವರೆಗೆ ಮಾಸಿಕ ₹ 2000 ನೀಡಬೇಕು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.