ADVERTISEMENT

ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ: ಶಾಸಕರಿಗೆ ಬಿಎಸ್‌ವೈ ಅಭಿನಂದನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಡಿಸೆಂಬರ್ 2021, 13:01 IST
Last Updated 23 ಡಿಸೆಂಬರ್ 2021, 13:01 IST
ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನುಗುರುವಾರ ಅಂಗೀಕರಿಸಲಾಗಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2021ಅನ್ನು ವಿಧಾನಸಭೆ ಅಂಗೀಕರಿಸಿದ್ದು, ನಮ್ಮ ಪಕ್ಷದ ಎಲ್ಲಾಶಾಸಕರನ್ನು ಅಭಿನಂದಿಸುತ್ತೇನೆ’ ಎಂದು ತಿಳಿಸಿದ್ದಾರೆ.

‘ವಂಚನೆಯ, ಬಲವಂತದ ಅಥವಾ ಆಮಿಷದ ಮತಾಂತರ ಎನ್ನುವ ಪಿಡುಗನ್ನು ಕಿತ್ತೊಗೆಯಬೇಕು ಎನ್ನುವುದು ಪಕ್ಷದ ಹಾಗೂ ಸರ್ಕಾರದ ಬದ್ಧತೆ. ಈ ನಿಟ್ಟಿನಲ್ಲಿ ವಿಧೇಯಕದ ಅನುಮೋದನೆ ಚರಿತ್ರಾರ್ಹವಾಗಿದೆ’ ಎಂದೂ ಬಿಎಸ್‌ವೈ ಟ್ವೀಟ್‌ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.