ಹುಬ್ಬಳ್ಳಿ: ಜಿಲ್ಲಾ, ತಾಲ್ಲೂಕು, ಮಹಾನಗರ ಪಾಲಿಕೆ, ನಗರಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಸೋಮವಾರ ಇಲ್ಲಿ ನಡೆದ ಬೆಳಗಾವಿ ಮಟ್ಟದ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಅಭ್ಯರ್ಥಿಗಳಿಗೆ ನೇರವಾಗಿ ಬಿ ಫಾರಂ ನೀಡುವ ಬದಲಾಗಿ ಅವರ ಸಂಘಟನಾ ಸಾಮರ್ಥ್ಯ, ಅನುಭವ, ಇತ್ಯಾದಿ ಕಾರ್ಯಗಳನ್ನು ಪರಿಶೀಲಿಸಿ ಟಿಕೆಟ್ ನೀಡಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.