ADVERTISEMENT

ಕಾಡುಗೊಲ್ಲರ ನಿಗಮದ ಅಧ್ಯಕ್ಷರ ನೇಮಕ: ಮರು ಆದೇಶ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2023, 18:46 IST
Last Updated 3 ಫೆಬ್ರುವರಿ 2023, 18:46 IST
ಚಂಗಾವರ ಮಾರಣ್ಣ
ಚಂಗಾವರ ಮಾರಣ್ಣ   

ಶಿರಾ: ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಂಗಾವರ ಮಾರಣ್ಣ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮರು ಆದೇಶ ಹೊರಡಿಸಿದೆ.

ಈ ಹಿಂದೆ ನಿಗಮದ ಅಧ್ಯಕ್ಷರಾಗಿ ಮಾರಣ್ಣ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿತ್ತು. ಕೆಲವರು ಅವರ ನೇಮಕ ವಿರೋಧಿಸಿದ ಕಾರಣ ಅಧಿ ಕಾರ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ.

‘ಶಿರಾ ವಿಧಾನಸಭಾ ಉಪ ಚುನಾವಣೆ ಸಮಯದಲ್ಲಿ ಕಾಡುಗೊಲ್ಲ ಸಮುದಾಯಕ್ಕೆ ಕೊಟ್ಟ ಭರವಸೆಯಂತೆ ನಿಗಮ ಸ್ಥಾಪಿಸಲಾಗಿತ್ತು. ಪಕ್ಷ ಹಾಗೂ ಸಮುದಾಯಕ್ಕೆ ಮಾರಣ್ಣ ಸಲ್ಲಿಸಿರುವ ಸೇವೆ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಿಕೊಡಲಾಗಿತ್ತು’ ಎಂದು ಶಿರಾ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.