ADVERTISEMENT

ಶಿವಾಜಿ ಛತ್ರಪ್ಪಗೆ ಡಿ.ದೇವರಾಜ ಅರಸು ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2018, 20:01 IST
Last Updated 4 ಡಿಸೆಂಬರ್ 2018, 20:01 IST
.
.   

ಬೆಂಗಳೂರು: 2018 ನೇ ಸಾಲಿನ ಡಿ.ದೇವರಾಜ ಅರಸು ರಾಜ್ಯ ಮಟ್ಟದ ಪ್ರಶಸ್ತಿಗೆ ಸಮಾಜ ಸುಧಾರಕ ಶಿವಾಜಿ ಛತ್ರಪ್ಪ ಕಾಗಣಿಕಾರ ಆಯ್ಕೆಯಾಗಿದ್ದಾರೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿಬುಧವಾರ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಸಾಹಿತಿ ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯ ಆಯ್ಕೆ ಸಮಿತಿ ಬೆಳಗಾವಿಯ ಕಾಗಣಿಕಾರ ಅವರನ್ನು ಪ್ರಶಸ್ತಿ ಆಯ್ಕೆ ಮಾಡಿದೆ. ಪ್ರಶಸ್ತಿ ₹5 ಲಕ್ಷ ನಗದು ಒಳಗೊಂಡಿದೆ.ಕಾಗಣಿಕಾರ ಅವರು ‘ಜನ ಜಾಗರಣಾ ಸಂಸ್ಥೆ’ಯ ಮೂಲಕ ರಾತ್ರಿ ಶಾಲೆಗಳನ್ನು ಆರಂಭಿಸಿದರು. ಅರಣ್ಯ ಪ್ರದೇಶಗಳಲ್ಲಿ ಸುತ್ತಾಡಿ ಅಲ್ಲಿನ ಜನರಿಗೆ ಶೈಕ್ಷಣಿಕ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು.

ADVERTISEMENT

‘ದೀನಬಂಧು’ ಎಂಬ ಸರಳ ಗೋಬರ್‌ ಗ್ಯಾಸ್‌ಗಳನ್ನು ಸರ್ಕಾರೇತರ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಪ್ರತಿ ಮನೆಗೂ ಅಳವಡಿಸುವ ವ್ಯವಸ್ಥೆ ಮಾಡಿದರು. 1978 ರಲ್ಲಿ ‘ಮಹಿಳಾ ಬಚತ್‌ ಘಟ್‌’ ಎಂಬ ಸ್ವಸಹಾಯ ಗುಂಪುಗಳನ್ನು ರಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.