ADVERTISEMENT

ಯಡಿಯೂರಪ್ಪ ಬಹುಮತ ಸಾಬೀತುಪಡಿಸಿದರೆ ರಾಜೀನಾಮೆ: ಅರವಿಂದ ಮಾಲಗತ್ತಿ 

​ಪ್ರಜಾವಾಣಿ ವಾರ್ತೆ
Published 26 ಜುಲೈ 2019, 9:08 IST
Last Updated 26 ಜುಲೈ 2019, 9:08 IST
   

ಬೆಂಗಳೂರು:'ಹೊಸ ಸರ್ಕಾರ ತನ್ನ ಬಹುಮತ ಮಾಡಿದ ತಕ್ಷಣವೇ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತೇನೆ' ಎಂದು ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ ಅವರು ಘೋಷಿಸಿದ್ದಾರೆ.

'ಅವಧಿ' ವೆಬ್‌ಸೈಟ್‌ನಡೆಸಿದ ವಿಡಿಯೋ ಸಂವಾದದಲ್ಲಿ ಅದರ ಪ್ರಧಾನ ಸಂಪಾದಕರಾದ ಜಿ ಎನ್ ಮೋಹನ್ ಅವರು ಕೇಳಿದ ಪ್ರಶ್ನೆಗೆ ಅರವಿಂದ ಮಾಲಗತ್ತಿ ಉತ್ತರಿಸಿದರು.

ಹೊಸ ಸರ್ಕಾರ ಬಂದ ತಕ್ಷಣ ರಾಜೀನಾಮೆ ನೀಡಬೇಕು ಎನ್ನುವ ನಿರ್ಬಂಧವೇನೂ ಇಲ್ಲ. ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ನೀಡಿದ ಶಿಫಾರಸು ಕೂಡ ಯಾವುದೇ ಅಧ್ಯಕ್ಷರು 3 ವರ್ಷದ ತಮ್ಮ ಅವಧಿ ಸಂಪೂರ್ಣಗೊಳಿಸುವ ಬಗ್ಗೆ ಒತ್ತು ನೀಡಿದೆ. ಆದರೆ ನಾನು ನೈತಿಕತೆಯ ಪ್ರಶ್ನೆಯನ್ನಿಟ್ಟಿಕೊಂಡು ರಾಜೀನಾಮೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.