ಬೆಂಗಳೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೋಗಾದಿಯಲ್ಲಿರುವ ವಿಲ್ಲಾದಲ್ಲಿ ಬುಧವಾರ ಅವರು ತಂಗಿದ್ದರು. ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಅಪೊಲೊ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜನ್ಯ ಅವರ ಆಪ್ತ ಮೂಲಗಳು ತಿಳಿಸಿವೆ.
ಸ್ಯಾಂಡಲ್ವುಡ್ನ ಪ್ರಖ್ಯಾತ ಸಂಗೀತ ನಿರ್ದೇಶಕರಾಗಿರುವ ಅರ್ಜುನ್ ಜನ್ಯ, ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುವ ರಿಯಾಲಿಟಿ
ಶೋಗಳ ತೀರ್ಪುಗಾರರೂ ಹೌದು. ಅಷ್ಟೇ ಅಲ್ಲದೆ, ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಹಲವು ಚಿತ್ರಗಳಿಗೆ ಹಾಡು ಹಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.