ಶಿವಮೊಗ್ಗ: ರಿಪಬ್ಲಿಕ್ ಟಿವಿ ವಾಹಿನಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಇಲ್ಲಿನ ಜಯನಗರ ಠಾಣೆಗೆ ದೂರು ನೀಡಿದೆ.
ಶೇ 80ರಷ್ಟು ಹಿಂದೂಗಳೇ ಇರುವ ಭಾರತದಲ್ಲಿ ಫಾಲ್ಕರ್ ಗುಂಪು ಹತ್ಯೆಯ ಕುರಿತು ಸೋನಿಯಾ ಗಾಂಧಿ ಮೌನ ವಹಿಸಿದ್ದಾರೆ. ಯಾರಾದರೂ ಮೌಲ್ವಿ ಅಥವಾ ಪಾದ್ರಿಯ ಹತ್ಯೆ ಆಗಿದ್ದರೆ, ದೇಶದ ತುಂಬಾ ಬೊಬ್ಬಿಡುತ್ತಿದ್ದರು ಎಂದು ಸೋನಿಯಾ ಗಾಂಧಿಯವರ ಬಗ್ಗೆ ತಮ್ಮ ಟಿವಿ ವಾಹಿನಿಯಲ್ಲಿ ಅರ್ನಾಬ್ ಹೇಳಿಕೆ ನೀಡಿದ್ದಾರೆ.
ದೇಶ ಕೊರೊನಾ ಸೋಂಕಿನ ಸಂಕಷ್ಟದಲ್ಲಿರುವಾಗ ಅರ್ನಾಬ್ ಗೋಸ್ವಾಮಿ ಪ್ರಚೋದನಕಾರಿ ಹೇಳಿಕೆ ನೀಡಿ ಹಿಂದೂ-ಮುಸ್ಲಿಮರ ನಡುವೆ ದ್ವೇಷದ ವಿಷ ಬೀಜ ಬಿತ್ತುತ್ತಿದ್ದಾರೆ. ಸೋನಿಯಾ ವಿರುದ್ಧ ಆಧಾರ ರಹಿತ ಹೇಳಿಕೆ ನೀಡಿದ್ದಾರೆ. ವಿನಾಕಾರಣ ಕಾಂಗ್ರೆಸ್ ದೂಷಿಸಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪ್ರವೀಣ್ ಕುಮಾರ್, ಕಾರ್ಯದರ್ಶಿ ಟಿ.ವಿ.ರಂಜಿತ್ ದೂರಿನಲ್ಲಿ ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.