ADVERTISEMENT

‘ಮದ್ಯ ಅತ್ಯಾವಶ್ಯಕ ವಸ್ತುವೇ’ ಶಾಸಕ ಬೆಲ್ಲದ ಪ್ರಶ್ನೆ

ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2021, 21:55 IST
Last Updated 25 ಏಪ್ರಿಲ್ 2021, 21:55 IST

ಧಾರವಾಡ: ‘ಮದ್ಯ ಅತ್ಯಾವಶ್ಯಕ ವಸ್ತುವೇ, ಮದ್ಯ ಯಾವಾಗಿನಿಂದ ಅವಶ್ಯಕವಾಯಿತು’ ಎಂದು ಶಾಸಕ ಅರವಿಂದ ಬೆಲ್ಲದ ಪ್ರಶ್ನಿಸಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ಫ್ಯೂ ವೇಳೆಯಲ್ಲಿ ಮದ್ಯದ ಅಂಗಡಿಗಳಿಗೆ ಅವಕಾಶ ನೀಡಿದ ಸರ್ಕಾರ ಅಗತ್ಯ ವಸ್ತುಗಳ ಅಂಗಡಿ ತೆರೆಯಲಿ. ಮದ್ಯದ ಅಂಗಡಿ ತೆರೆಯೋದು ಎಷ್ಟು ಸರಿ? ಆಡಳಿತದಈ ನಿರ್ಧಾರಕ್ಕೆ ನನ್ನ ವಿರೋಧವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಬಗ್ಗೆ ಕ್ರಮ ಕೈಗೊಳ್ಳಲು ನಾನು ಒತ್ತಾಯಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT