ADVERTISEMENT

ಆಶಾ ಕಾರ್ಯಕರ್ತೆಯರಿಗೆ ಪತ್ತಿನ ಸಹಕಾರ ಸಂಘ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 20:14 IST
Last Updated 6 ಜೂನ್ 2020, 20:14 IST
ಎಸ್‌.ಟಿ.ಸೋಮಶೇಖರ್
ಎಸ್‌.ಟಿ.ಸೋಮಶೇಖರ್   

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗಾಗಿ ಪ್ರತಿ ಜಿಲ್ಲೆಯಲ್ಲಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಸಹಕಾರ ಸಂಘಗಳ ನಿಬಂಧಕರಿಗೆ ಸೂಚನೆ ನೀಡಿದ್ದಾರೆ.

‘40 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರಿಗೆ ಆತ್ಮಸ್ಥೈರ್ಯ ತುಂಬಲು ಇಂತಹ ಪ್ರಯತ್ನ ಅಗತ್ಯ. ಪ್ರತಿ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬೇಕು. ಅವರಲ್ಲಿ ಪತ್ತಿನ ಸಹಕಾರ ಸಂಘದ ಬಗ್ಗೆ ಅರಿವು ಮೂಡಿಸಬೇಕು. 15 ದಿನದೊಳಗೆ ಈ ನಿಟ್ಟಿನಲ್ಲಿ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದ್ದಾರೆ.

ಕೋವಿಡ್‌ ಸಮರ ಸೇನಾನಿಗಳಾದ ಇವರಿಗೆ ಈಚೆಗೆ ಸಹಕಾರ ಸಂಘಗಳ ವತಿಯಿಂದ ತಲಾ ₹ 3 ಸಾವಿರ ಪ್ರೋತ್ಸಾಹಧನ ನೀಡಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.