ADVERTISEMENT

ಕೆಲಸಕ್ಕೆ ಹಾಜರಾದ ಆಶಾ ಕಾರ್ಯಕರ್ತೆಯರು

ತಿಂಗಳಿಗೆ ₹12 ಸಾವಿರ ಗೌರವಧನ ಪಾವತಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2020, 17:10 IST
Last Updated 30 ಜುಲೈ 2020, 17:10 IST

ಬೆಂಗಳೂರು: 20 ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಆಶಾ ಕಾರ್ಯಕರ್ತರು, ಸರ್ಕಾರದಿಂದ ಬೇಡಿಕೆ ಈಡೇರಿಕೆಯ ಭರವಸೆ ಸಿಗುತ್ತಿದ್ದಂತೆಯೇ ಗುರುವಾರದಿಂದ ಕೆಲಸಕ್ಕೆ ಮರಳಿದರು.

‘ತಿಂಗಳಿಗೆ ₹12 ಸಾವಿರ ಗೌರವಧನ ನೀಡುವುದು ಸೇರಿದಂತೆ ನಮ್ಮ ವಿವಿಧ ಬೇಡಿಕೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಸಿಎನ್. ಅಶ್ವತ್ಥ ನಾರಾಯಣ ಅವರು ಸಕಾರಾತ್ಮಕ ಸ್ಪಂದಿಸಿದ್ದಾರೆ’ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹೇಳಿದೆ.

‘ಜುಲೈ 10ರಿಂದ ಪ್ರತಿಭಟನೆ ನಡೆಸುತ್ತಿದ್ದೆವು. ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ಥಳಕ್ಕೆ ಬಂದು, ಬೇಡಿಕೆ ಈಡೇರಿಸುವುದಾಗಿ ಖಚಿತ ಭರವಸೆ ನೀಡಿದ್ದಾರೆ. ಈ ಭರವಸೆಯನ್ನು ವಿಶ್ವಾಸದಿಂದ ತೆಗೆದುಕೊಂಡು, ಪ್ರತಿಭಟನೆ ವಾಪಸ್‌ ಪಡೆದಿದ್ದೇವೆ. 30ರಿಂದಲೇ ಎಲ್ಲ ಕಾರ್ಯಕರ್ತರು ಕೆಲಸಕ್ಕೆ ಹಾಜರಾಗಿದ್ದಾರೆ’ ಎಂದು ಸಂಘದಅಧ್ಯಕ್ಷ ಕೆ. ಸೋಮಶೇಖರ್‌ ಯಾದಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.