ADVERTISEMENT

ಅಶೋಕ್ ಮನೆಯಲ್ಲಿ ಉಪಾಹಾರ ಸೇವಿಸಿದ್ದ ಸಿಎಂ!

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2018, 20:01 IST
Last Updated 19 ನವೆಂಬರ್ 2018, 20:01 IST
ಎಚ್‌.ಡಿ. ಕುಮಾರಸ್ವಾಮಿ ಜತೆ ಅಶೋಕ ಯಮಕನಮರಡಿ (ಮಧ್ಯದಲ್ಲಿರುವವರು)
ಎಚ್‌.ಡಿ. ಕುಮಾರಸ್ವಾಮಿ ಜತೆ ಅಶೋಕ ಯಮಕನಮರಡಿ (ಮಧ್ಯದಲ್ಲಿರುವವರು)   

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಗೇಟಿನ ಬೀಗವನ್ನು ಭಾನುವಾರ ಕಲ್ಲಿನಿಂದ ಜಜ್ಜಿ ಒಡೆಯಲು ಯತ್ನಿಸಿದ್ದ ರೈತ ಮುಖಂಡ ಅಶೋಕ ಯಮಕನಮರಡಿ ಅವರನ್ನು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ‘ಗೂಂಡಾ’ ಎಂದು ಜರಿದಿದ್ದರು. ಆದರೆ, ಅವರು ಅದೇ ಮುಖಂಡನೊಂದಿಗೆ ಇರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಖಾನಾಪುರ ತಾಲ್ಲೂಕು ಗಂದಿಗವಾಡ ಗ್ರಾಮದ ಅಶೋಕ ಯಮಕನಮರಡಿ, ರೈತ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ವಿವಿಧ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈಚೆಗೆ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಿದ್ದ ಜನತಾದರ್ಶನ ವೇಳೆ, ರೈತರು ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅವರಿಂದ, ಮುಖ್ಯಮಂತ್ರಿ ಮನವಿಯನ್ನೂ ಸ್ವೀಕರಿಸಿದ್ದರು.

ಇದಲ್ಲದೇ, 2 ವರ್ಷಗಳ ಹಿಂದೆ ಅವರ ಮನೆಯಲ್ಲಿ ಕುಮಾರಸ್ವಾಮಿ ಉಪಾಹಾರ ಸೇವಿಸಿದ್ದರು ಎನ್ನಲಾದ ಪೋಟೊಗಳನ್ನೂ ಹಾಕಲಾಗಿದ್ದು, ಚರ್ಚೆಗೆ ಗ್ರಾಸವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.