ಕೊಪ್ಪಳ: ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಸೋಮವಾರ ಕೊಪ್ಪಳಕ್ಕೆ ಭೇಟಿ ನೀಡಿದರು.
ಇಲ್ಲಿನ ಪ್ರಸಿದ್ಧ ಗವಿಮಠಕ್ಕೆ ಬಂದು ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರೊಂದಿಗೆ ಕೆಲ ಹೊತ್ತು ಚರ್ಚಿಸಿ ಮಠದ ಪರಂಪರೆ, ಇತಿಹಾಸ, ಜಾತ್ರೆಯ ವಿಶೇಷತೆ, ಜಾತ್ರೆಗೆ ಬರುವ ಭಕ್ತರಿಗೆ ಊಟದ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಉಚಿತ ಪ್ರಸಾದ ವ್ಯವಸ್ಥೆ ಹೀಗೆ ಹಲವು ಮಾಹಿತಿಗಳನ್ನು ಪಡೆದುಕೊಂಡರು.
ಅಸ್ಸಾಂನಲ್ಲಿರುವ ವಾತಾವರಣ, ಅಲ್ಲಿನ ಜನರ ಬಗ್ಗೆ ಸ್ವಾಮೀಜಿ ಮಾಹಿತಿ ಪಡೆದರು. ಇದೆ ವೇಳೆ ಬಿಸ್ವಾ ಅಸ್ಸಾಂಗೆ ಬರುವಂತೆ ಆಹ್ವಾನ ನೀಡಿದರು.
ಇಲ್ಲಿಂದ ಅವರು ಗಂಗಾವತಿಯಲ್ಲಿ ಆಯೋಜನೆಯಾಗಿರುವ ಬಿಜೆಪಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.