ಚಿಕ್ಕಮಗಳೂರು: ತಾಲ್ಲೂಕಿನ ಕಂಬಿಹಳ್ಳಿ ಬಳಿ ಭದ್ರಾ ವನ್ಯಜೀವಿ ಸಂರಕ್ಷಣಾ ಟ್ರಸ್ಟ್ ಮುಖ್ಯಸ್ಥ ಡಿ.ವಿ.ಗಿರೀಶ್, ಇತರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳ ಶೋಧ ಕಾರ್ಯಾಚರಣೆಯಲ್ಲಿ ಪೊಲೀಸ್ ತಂಡ ತೊಡಗಿದೆ.ಹೊರ ಜಿಲ್ಲೆಗೆ ಪರಾರಿಯಾಗಿದ್ದ ಈ ಇಬ್ಬರನ್ನು ಪತ್ತೆ ಹಚ್ಚಿದೆ.
ತಲೆ ಮರೆಸಿಕೊಂಡಿರವ ಇತರ ಆರೋಪಿಗಳ ಜಾಡು ಪತ್ತೆ ನಿಟ್ಟಿನಲ್ಲಿ ತಂಡವು ಕಾರ್ಯ ಪ್ರವೃತವಾಗಿದೆ. ಒಟ್ಟು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಚುರುಕುಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.