ADVERTISEMENT

ಹಲ್ಲೆ ಪ್ರಕರಣ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 4:03 IST
Last Updated 2 ಸೆಪ್ಟೆಂಬರ್ 2021, 4:03 IST

ಚಿಕ್ಕಮಗಳೂರು: ತಾಲ್ಲೂಕಿನ ಕಂಬಿಹಳ್ಳಿ ಬಳಿ ಭದ್ರಾ ವನ್ಯಜೀವಿ ಸಂರಕ್ಷಣಾ ಟ್ರಸ್ಟ್‌ ಮುಖ್ಯಸ್ಥ ಡಿ.ವಿ.ಗಿರೀಶ್‌, ಇತರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳ ಶೋಧ ಕಾರ್ಯಾಚರಣೆಯಲ್ಲಿ ಪೊಲೀಸ್ ತಂಡ ತೊಡಗಿದೆ.ಹೊರ ಜಿಲ್ಲೆಗೆ ಪರಾರಿಯಾಗಿದ್ದ ಈ ಇಬ್ಬರನ್ನು ಪತ್ತೆ ಹಚ್ಚಿದೆ.

ತಲೆ ಮರೆಸಿಕೊಂಡಿರವ ಇತರ ಆರೋಪಿಗಳ ಜಾಡು ಪತ್ತೆ ನಿಟ್ಟಿನಲ್ಲಿ ತಂಡವು ಕಾರ್ಯ ಪ್ರವೃತವಾಗಿದೆ. ಒಟ್ಟು ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಚುರುಕುಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.