ADVERTISEMENT

VIDEO | ಸಿದ್ದರಾಮಯ್ಯ ವಾಹನಕ್ಕೆ ಹಣ ಎಸೆದು ಆಕ್ರೋಶ

​ಪ್ರಜಾವಾಣಿ ವಾರ್ತೆ
Published 15 ಜುಲೈ 2022, 10:02 IST
Last Updated 15 ಜುಲೈ 2022, 10:02 IST
   

ಬಾಗಲಕೋಟೆ: ಕುಳಗೇರಿ ಕ್ರಾಸ್ ದಾಬಾ ಬಳಿ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ ಸಂತ್ರಸ್ತರಿಗೆ ನೀಡಿದ್ದ ₹2 ಲಕ್ಷವನ್ನು ಅವರ ಕುಟುಂಬದ ಸದಸ್ಯರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಾಹನದ ಮೇಲೆ‌ ಎಸೆದರು.

ಘಟನೆ ನಡೆದು ಇಷ್ಟು ದಿನವಾದರೂ ಯಾರು ಬಂದು ಮಾತನಾಡಿಸಿಲ್ಲ. ಸಚಿವರು ಬಂದರೂ ಕೆಲವರನ್ಮಷ್ಟೇ ಮಾತನಾಡಿಸಿಕೊಂಡು ಹೋಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಲ್ಲೆಯಲ್ಲಿ ಗಾಯಗೊಂಡಿದ್ದ ಮಹಮ್ಮದ್ ಹನೀಫ್ ಸೇರಿದಂತೆ ನಾಲ್ವರಿಗೆ ಸಾಂತ್ವನ ಹೇಳಿ ತಲಾ‌₹ 50 ಸಾವಿರ ಮೊತ್ತವನ್ನು ಸಿದ್ದರಾಮಯ್ಯ ನೀಡಿದರು.

ADVERTISEMENT

ಮಾಜಿ ಶಾಸಕ ಎಚ್.ವೈ. ಮೇಟಿ ಸೇರಿದಂತೆ ಯಾರೂ ಬಂದಿಲ್ಲ. ಈಗ ಬಂದಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡ ಅವರು, ಹಣ ವಾಪಸ್ ನೀಡಿದ್ದರು.

ಅವರನ್ನು ಸಮಾಧಾನಪಡಿಸಿ ಹಣ ನೀಡಿ ಬಂದಿದ್ದರು. ಕೆಳಗಡೆ ಬಂದು ಮಾತನಾಡಲು ಮುಂದಾದಾಗ ಸಿದ್ದರಾಮಯ್ಯ ಅವರಿದ್ದ‌ ವಾಹನ ಮುಂದಕ್ಕೆ ಹೋಯಿತು.ಆಗ ನಿಮ್ಮ ಹಣ ಬೇಡ ಎಂದು ವಾಹನಕ್ಕೆ ಎಸೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.