ADVERTISEMENT

ಪಾನಮತ್ತ ಯೋಧನಿಂದ ಸಿಪಿಐ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2019, 19:14 IST
Last Updated 19 ಮಾರ್ಚ್ 2019, 19:14 IST

ಹರಿಹರ: ನಗರದ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಸಮೀಪದ ಚೆಕ್‍ಪೋಸ್ಟ್‌ ಬಳಿ ಕಾರ್ಯನಿರ್ವಹಿಸುತ್ತಿದ್ದ ಸಿಪಿಐ ಐ.ಎಸ್‍. ಗುರುನಾಥ್‍ ಅವರ ಮೇಲೆ ಸೋಮವಾರ ತಡರಾತ್ರಿ ಯೋಧರೊಬ್ಬರು ಹಲ್ಲೆ ಮಾಡಿದ್ದಾರೆ.

ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಣೆಬೆನ್ನೂರು ತಾಲ್ಲೂಕಿನ ಕವಲೆತ್ತು ಗ್ರಾಮದ ಪ್ರಭು ಹೊನ್ನಪ್ಪನವರ ಪಾನಮತ್ತ
ರಾಗಿ ಪಟ್ಟಣದಲ್ಲಿ ಬೈಕ್‍ ಚಲಾಯಿಸುತ್ತಿದ್ದರು. ಸಿಪಿಐ ಬೈಕ್‍ ನಿಲ್ಲಿಸಿ ವಿಚಾರಿಸುತ್ತಿರುವಾಗ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಸಿಪಿಐ ಮೂಗಿಗೆ ಬಲವಾದ ಪೆಟ್ಟು ಬಿದ್ದಿದೆ.

ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.