ADVERTISEMENT

ಎನ್‍ಎಸ್‍ಯುಐ ಸದಸ್ಯರ ಮೇಲೆ ಹಲ್ಲೆ: ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 19:32 IST
Last Updated 7 ಜೂನ್ 2022, 19:32 IST
ಬಿಜೆಪಿ
ಬಿಜೆಪಿ    

ತಿಪಟೂರು: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮನೆ ಮುಂದೆ ಪ್ರತಿಭಟಿಸಿದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‍ಎಸ್‍ಯುಐ) ಸದಸ್ಯರ ಮೇಲೆ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಸೋಮವಾರ ರಾತ್ರಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೈಗಳಿಂದ ಹಲ್ಲೆ, ಪ್ರಾಣ ಬೆದರಿಕೆ, ಗಾಡಿ ಜಖಂಮಾಡಿರುವ ಬಗ್ಗೆ ಜಯಸಿಂಹ ಮಾದಿಹಳ್ಳಿ ಮತ್ತು ಇತರಬಿಜೆಪಿ ಕಾರ್ಯಕರ್ತರ ವಿರುದ್ಧ ನಗರ ಠಾನೆಯಲ್ಲಿ ದೂರು ದಾಖಲಾಗಿದೆ.

ವಿದ್ಯಾರ್ಥಿಗಳ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ ಬಗ್ಗೆ ಜೂನ್‌ 2ರಂದು ನಗರ ಠಾಣೆಗೆ ದೂರು ನೀಡಲಾಗಿತ್ತು. ಆದರೆ, ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸಿದ್ದರು. ಪೊಲೀಸರ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.