ADVERTISEMENT

ಫಿನ್‌ಟೆಕ್‌ಗಳಿಗೆ ಅಗತ್ಯ ನೆರವು: ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಭರವಸೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 16:44 IST
Last Updated 3 ಡಿಸೆಂಬರ್ 2021, 16:44 IST
ವಿಚಾರ ಸಂಕಿರಣವನ್ನು ಸಚಿವ ಸಚಿವ ಮುರುಗೇಶ್ ನಿರಾಣಿ ಉದ್ಘಾಟಿಸಿದರು. ಐಒವಿ ರಾಷ್ಟ್ರೀಯ ಅಧ್ಯಕ್ಷ ಪಿ.ಕೆ.ತ್ಯಾಗರಾಜನ್, ಪ್ರಧಾನ ಕಾರ್ಯದರ್ಶಿ ವಿನಯ್ ಗೋಯಲ್, ಬೆಂಗಳೂರು ಶಾಖೆಯ ಅಧ್ಯಕ್ಷ ಜಿ.ಎಸ್.ರಾಜು, ಕಾರ್ಯದರ್ಶಿ ಕೆ.ಎಂ.ಮಂಜುನಾಥ ಹಾಗೂ ಎಂ.ಎಸ್.ಸಾಹೂ ಇದ್ದಾರೆ.
ವಿಚಾರ ಸಂಕಿರಣವನ್ನು ಸಚಿವ ಸಚಿವ ಮುರುಗೇಶ್ ನಿರಾಣಿ ಉದ್ಘಾಟಿಸಿದರು. ಐಒವಿ ರಾಷ್ಟ್ರೀಯ ಅಧ್ಯಕ್ಷ ಪಿ.ಕೆ.ತ್ಯಾಗರಾಜನ್, ಪ್ರಧಾನ ಕಾರ್ಯದರ್ಶಿ ವಿನಯ್ ಗೋಯಲ್, ಬೆಂಗಳೂರು ಶಾಖೆಯ ಅಧ್ಯಕ್ಷ ಜಿ.ಎಸ್.ರಾಜು, ಕಾರ್ಯದರ್ಶಿ ಕೆ.ಎಂ.ಮಂಜುನಾಥ ಹಾಗೂ ಎಂ.ಎಸ್.ಸಾಹೂ ಇದ್ದಾರೆ.   

‌ಬೆಂಗಳೂರು: ‘ಫಿನ್‌ಟೆಕ್ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದೆ ಬಂದರೆ, ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡಲಾಗುವುದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಇನ್‌ಸ್ಟಿಟ್ಯೂಟ್‌ ಆಫ್ ವ್ಯಾಲ್ಯೂವರ್ಸ್ (ಐಇವಿ) ಹಾಗೂಭಾರತೀಯ ಹಣಕಾಸು ನಷ್ಟ ಮತ್ತು ದಿವಾಳಿ ಮಂಡಳಿ (ಐಬಿಬಿಐ) ಸಹಯೋಗದಲ್ಲಿಶುಕ್ರವಾರ ಆಯೋಜಿಸಿದ್ದ ‘ಭಾರತೀಯ ಮೌಲ್ಯಮಾಪಕರ ಸಮಾವೇಶ’ ಹಾಗೂ ‘ಮೌಲ್ಯಮಾಪನ ಪರಿಸರ ವ್ಯವಸ್ಥೆಯನ್ನು ಪರಿವರ್ತಿಸುವುದು’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

‘ಕರ್ನಾಟಕ ದೇಶದಲ್ಲೇ ‌ಅತ್ಯಂತ ಜನಪ್ರಿಯ ಹಣಕಾಸು ತಂತ್ರಜ್ಞಾನ ಕಂಪನಿಗಳ ನೆಲೆಯಾಗಿದೆ. ರಾಜ್ಯದಲ್ಲಿ ಅತ್ಯುತ್ತಮ ಆರ್ಥಿಕ ಕೈಗಾರಿಕಾ ಪರಿಸರವ್ಯವಸ್ಥೆ ನಿರ್ಮಿಸುವುದು ನಮ್ಮ ಮೊದಲ ಆದ್ಯತೆ. ಮೂಲಸೌಕರ್ಯ ಮತ್ತು ಉದಯೋನ್ಮುಖ ಕೈಗಾರಿಕೆಗಳಲ್ಲಿ ಕರ್ನಾಟಕವನ್ನು ಅಗ್ರಸ್ಥಾನಕ್ಕೆ ಏರಿಸುವುದು ನಮ್ಮ ಗುರಿ’ ಎಂದರು.

ADVERTISEMENT

‘ಉದ್ಯಮಶೀಲ ಪರಿಸರ ವ್ಯವಸ್ಥೆಯು ಯುವ ವೃತ್ತಿಪರರು ಉದ್ಯೋಗದಾತರಾಗಲು ಹಾಗೂ ವಿವಿಧ ಕ್ಷೇತ್ರಗಳನ್ನು ಅನ್ವೇಷಿಸಲು ಅನುವು ಮಾಡಿಕೊಡುತ್ತದೆ. ಹಾಗಾಗಿ, ಉದ್ಯೋಗದಾತರಾಗಿ ರಾಜ್ಯದಲ್ಲಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲು ಸರ್ಕಾರ ಬಯಸುತ್ತದೆ’ ಎಂದು ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್.ವೇಣುಗೋಪಾಲ್ ಹಾಗೂ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.