ADVERTISEMENT

ಅಟ್ರಾಸಿಟಿ ಕೇಸ್‌: ನಟ ಉಪೇಂದ್ರಗೆ ರಿಲೀಫ್ ನೀಡಿದ ಹೈಕೋರ್ಟ್

ಪ್ರಜಾವಾಣಿ ವಿಶೇಷ
Published 15 ಆಗಸ್ಟ್ 2023, 1:52 IST
Last Updated 15 ಆಗಸ್ಟ್ 2023, 1:52 IST

ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ನೇರಪ್ರಸಾರದ ವೇಳೆ, ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ ಆರೋಪದಡಿ ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕ ಮಧುಸೂದನ್ ಕೆ.ಎನ್, ಅವರು ದೂರು ನೀಡಿದ್ದು ಅಟ್ರಾಸಿಟಿ ಕೇಸ್ ದಾಖಲಿಸಿದ್ದರು. ಈ ಹಿನ್ನೆಲೆ ಹೈಕೋರ್ಟ್ ಮೆಟ್ಟಿಲೇರಿದ್ದ ಉಪೇಂದ್ರ ಅವರಿಗೆ ಬಿಗ್ ರಿಲೀಫ್‌ ಸಿಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.