ಉಡುಪಿ: ಶಿವಮೊಗ್ಗದಲ್ಲಿ ಬಜರಂಗದಳ ಮುಖಂಡನ ಮೇಲೆ ನಡೆದ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದ್ದು, ಸಧ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಲ್ಪೆ ಸೀವಾಕ್ ಬಳಿ ಗುರುವಾರ ರಾತ್ರಿ ಬಯಲು ರಂಗಮಂದಿರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಶಿವಮೊಗ್ಗದ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗಲಾಟೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಮುಂದೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪೂರ್ವವಲಯ ಐಜಿಪಿ ಹಾಗೂ ಎಸ್ಪಿ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಕರ್ಫ್ಯೂ ಜಾರಿಗೆ ಸೂಚನೆ ನೀಡಿದ್ದೇನೆ’ ಎಂದರು.
ಶುಕ್ರವಾರ ಸಚಿವ ಈಶ್ವರಪ್ಪ ಹಾಗೂ ಸಂಸದ ರಾಘವೇಂದ್ರ ಶಾಂತಿ ಸಭೆ ನಡೆಸಲಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.