ADVERTISEMENT

ಕಾಂಗ್ರೆಸ್ ಮುಖಂಡರ ಜೊತೆಗೂ ಫೋಟೊ ತೆಗೆಸಿಕೊಂಡಿರುವ ಭರತ್‌ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 4:00 IST
Last Updated 1 ಜೂನ್ 2022, 4:00 IST
ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿ, ಮಸಿ ಎರಚಿದ ಆರೋಪಿ ಭರತ್‌ ಶೆಟ್ಟಿ
ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿ, ಮಸಿ ಎರಚಿದ ಆರೋಪಿ ಭರತ್‌ ಶೆಟ್ಟಿ   

ಬೆಂಗಳೂರು: ‘ಬಿಜೆಪಿ ಮುಖಂಡರು ಮಾತ್ರವಲ್ಲದೇ, ಕಾಂಗ್ರೆಸ್ ಮುಖಂಡರ ಜೊತೆಗೂ ಆರೋಪಿ ಭರತ್ ಶೆಟ್ಟಿ ಫೋಟೊ ತೆಗೆಸಿಕೊಂಡಿದ್ದಾನೆ. ಈ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಫೋಟೊ ತೆಗೆಸಿಕೊಂಡ ಮಾತ್ರಕ್ಕೆ ಮುಖಂಡರ ಜೊತೆ ಆರೋಪಿ ಒಡನಾಟ ಹೊಂದಿದ್ದನೆಂದು ಹೇಳಲಾಗದು’ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ಕಿಸಾನ್‌ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಭಾರತ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಭರತ್‌ ಶೆಟ್ಟಿ ಸೇರಿದಂತೆ ಮೂವರನ್ನು ಹೈಗ್ರೌಂಡ್ಸ್‌ ಪೊಲೀಸರು ಬಂಧಿಸಿದ್ದಾರೆ.

‘ಕನ್ನಡ ಮಾತನಾಡಲಿಲ್ಲವೆಂಬ ಕಾರಣಕ್ಕೆ ಹಲ್ಲೆ ಮಾಡಿ, ಮಸಿ ಎರಚಿದೆವು’ ಎಂಬುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಆದರೆ, ಇದು ದಿಕ್ಕು ತಪ್ಪಿಸುವ ಹೇಳಿಕೆ. ವ್ಯವಸ್ಥಿತ ಸಂಚು ರೂಪಿಸಿ ಕೃತ್ಯ ಎಸಗಿರುವುದಕ್ಕೆ ಪುರಾವೆಗಳು ಸಿಕ್ಕಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.