ADVERTISEMENT

ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿಗೆ ಪ್ರಭಾಕರ ಜೋಶಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2020, 14:14 IST
Last Updated 5 ಮಾರ್ಚ್ 2020, 14:14 IST
ಡಾ.ಎಂ. ಪ್ರಭಾಕರ ಜೋಶಿ
ಡಾ.ಎಂ. ಪ್ರಭಾಕರ ಜೋಶಿ   

ಉಡುಪಿ: ರಾಷ್ಟ್ರಕವಿ ಗೋವಿಂದಪೈ ಸಂಶೋಧನಾ ಕೇಂದ್ರದಿಂದ ಕೊಡಮಾಡುವ 2020ನೇ ಸಾಲಿನ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿಗೆ ಖ್ಯಾತ ವಿದ್ವಾಂಸ ಹಾಗೂ ಯಕ್ಷಗಾನ ಅರ್ಥಧಾರಿಯಾದ ಡಾ.ಎಂ. ಪ್ರಭಾಕರ ಜೋಶಿ ಆಯ್ಕೆಯಾಗಿದ್ದಾರೆ.

ಮಾರ್ಚ್ 7ರಂದು ಬೆಳಿಗ್ಗೆ 10.30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಪ್ರಭಾಕರ ಜೋಷಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹ 10,000 ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

ಅಂದಿನ ಕಾರ್ಯಕ್ರಮದಲ್ಲಿ ಮಾಹೆ ಆಡಳಿತಾಧಿಕಾರಿ ಡಾ.ಎಚ್‌.ಶಾಂತಾರಾಮ್‌, ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿಯ ಅಧ್ಯಕ್ಷರಾದ ಪ್ರೊ.ಬಿ.ಎ. ವಿವೇಕ ರೈ, ಕಾರ್ಯದರ್ಶಿ ಮನೋರಮ ಎಂ.ಭಟ್‌, ಪ್ರೊ.ಎಂ.ಎಲ್‌. ಸಾಮಗ ಉಪಸ್ಥಿತರಿರಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.