ADVERTISEMENT

ರಘುನಾಥ ಚ.ಹ. ಕಥೆಗೆ ಚಿನ್ನದ ಪದಕ

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 22:12 IST
Last Updated 6 ಜನವರಿ 2021, 22:12 IST
ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕಿ ರೇಣುಕಾ ರಮಾನಂದ ಹಾಗೂ ಸುಧಾ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು
ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕಿ ರೇಣುಕಾ ರಮಾನಂದ ಹಾಗೂ ಸುಧಾ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು   

ಕಲಬುರ್ಗಿ: ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ. ಅವರ ‘ಗೋರಿ’ ಕಥೆಗೆ ಗುಲಬರ್ಗಾ ವಿ.ವಿ. ಪ್ರಸಾರಾಂಗದ ದಿ.ಜಯತೀರ್ಥ ರಾಜಪುರೋಹಿತ ಸ್ಮಾರಕ ದತ್ತಿ ರಾಜ್ಯಮಟ್ಟದ ಕನ್ನಡ ಸಣ್ಣ ಕಥಾ ಸ್ಪರ್ಧೆಯಲ್ಲಿ ಚಿನ್ನದ ಪದಕ ದೊರಕಿದ್ದು, ಬುಧವಾರ ನಡೆದ ಸಮಾರಂಭದಲ್ಲಿ ಹಂಗಾಮಿ ಕುಲಪತಿ ಪ್ರೊ.ಚಂದ್ರಕಾಂತ ಯಾತನೂರ ಪ್ರಶಸ್ತಿ ಪ್ರದಾನ ಮಾಡಿದರು.

ಇದುಪ್ರಶಸ್ತಿ ಫಲಕ, ₹ 5 ಸಾವಿರ ನಗದು ಒಳಗೊಂಡಿದೆ.

ಅಂಕೋಲಾದ ಲೇಖಕಿ ರೇಣುಕಾ ರಮಾನಂದ ಅವರಿಗೆ ‘ಬಾಳ ಪಯಣ’ ಕಥೆಗಾಗಿ ಬೆಳ್ಳಿ ಪದಕ ಹಾಗೂ ₹ 3 ಸಾವಿರ ನೀಡಿ ಗೌರವಿಸಲಾಯಿತು.

ADVERTISEMENT

ಡಾ.ಸಿ.ನಂದಿನಿ ರಚಿಸಿದ ‘ಬೆಳಕಿನೆಡೆಗೆ’ ಕೃತಿಯು ವಿಜ್ಞಾನ ವಿಭಾಗದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದರಿಂದ ಅವರಿಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ. ವಸಂತಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.