ಬೆಂಗಳೂರು: ಕೊರೊನಾ ಆತಂಕದ ನಡುವೆಯೂ ರಾಜ್ಯದೆಲ್ಲೆಡೆ ಭಾನುವಾರ ಆಯುಧ ಪೂಜೆ ಆಚರಿಸಲಾಗುತ್ತಿದೆ.
ಆಯುಧ ಪೂಜೆಯ ದಿನವಾದ ಇಂದು ಜನರು ವಾಹನಗಳಿಗೆ ಬಾಳೆ ಕಂದು ಕಟ್ಟಿ, ಹೂವಿನ ಮಾಲೆ ಹಾಕಿ ಅಲಂಕರಿಸಿ ಪೂಜೆ ಸಲ್ಲಿಸಿದರು.
ದೇವಾಲಯಗಳಲ್ಲಿ ವಾಹನಗಳ ಪೂಜೆಗಾಗಿ ವಿಶೇಷ ಏರ್ಪಾಡು ಮಾಡಲಾಗಿತ್ತು. ಸರತಿ ಸಾಲಿನಲ್ಲಿ
ನಿಂತು ವಾಹನಗಳಿಗೆ ಪೂಜೆ ಮಾಡಿಸಿಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು. ಜನರು ಯಂತ್ರೋ ಪಕರಣಗಳಿಗೂ ಪೂಜೆ ಮಾಡಿದರು.
ಮೈಸೂರಿನಲ್ಲಿ ಯದುವೀರ್ ಒಡೆಯರ್ ಅವರು ಅರಮನೆಯಲ್ಲಿ ಆಯುಧ ಪೂಜೆ ನೆರವೇರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.