ADVERTISEMENT

ಕೋವಿಡ್‌ ತಾಂತ್ರಿಕ ಸಮಿತಿಗೆ ಇಬ್ಬರು ಆಯುಷ್‌ ತಜ್ಞರ ನಾಮನಿರ್ದೇಶನ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 5:35 IST
Last Updated 18 ಜನವರಿ 2021, 5:35 IST
ಆಯುಷ್‌-ಪ್ರಾತಿನಿಧಿಕ ಚಿತ್ರ
ಆಯುಷ್‌-ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿ ರಚಿಸಲಾದ ತಾಂತ್ರಿಕ ಸಲಹಾ ಸಮಿತಿಗೆ ಇಬ್ಬರು ಆಯುಷ್‌ ತಜ್ಞರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಮಿತಿಗೆ ನಾಮ ನಿರ್ದೇಶನ ಮಾಡಲಾಗಿದೆ.

ರಾಷ್ಟ್ರೀಯ ಆಯುಷ್‌ ಮಿಶನ್‌ನ ಯೋಜನಾ ನಿರ್ದೇಶಕರಾದ ಡಾ. ಅನಂತ ದೇಸಾಯಿ ಅವನರನ್ನು ಸದಸ್ಯರನ್ನಾಗಿ ಮತ್ತು ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಹ ಪ್ರಾಧ್ಯಾಪಕರಾದ ಡಾ. ಆನಂದ ಕಟ್ಟಿ ಅವರರನ್ನು ಪರ್ಯಾಯ ಸದಸ್ಯರಾಗಿ ರಾಜ್ಯ ಸರ್ಕಾರ ನಾಮ ನಿರ್ದೇಶನ ಮಾಡಿದೆ.

ಕೋವಿಡ್‌ಗೆ ಆಯುಷ್‌ ವೈದ್ಯ ಪದ್ಧತಿಗಳ ಮೂಲಕ ಪರಿಣಾಮಕಾರಿ ಚಿಕಿತ್ಸೆ ನೀಡುವ ಉದ್ದೇಶದಿಂದ ಆಯುಷ್‌ ವೈದ್ಯರನ್ನು ಸಮಿತಿಗೆ ನೇಮಿಸಿಕೊಳ್ಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.