ಬೆಂಗಳೂರು: ರಾಜ್ಯ ರಾಜಕಾರಣ ಕ್ಷಣ ಕ್ಷಣಕ್ಕೂ ತಿರುವು ಪಡೆಯುತ್ತಿರುವ ಬೆನ್ನಲೇ ಕಾಂಗ್ರೆಸ್ನ ಕೇಂದ್ರನಾಯಕರಾದ ಗುಲಾಂ ನಬಿ ಅಜಾದ್ ಮತ್ತು ಬಿ.ಕೆ ಹರಿಪ್ರಸಾದ್ ಬೆಂಗಳೂರಿಗೆ ಬರಲಿದ್ದಾರೆ.
ರಾಜೀನಾಮೆ ನೀಡಿರುವ ರೋಶನ್ ಬೇಗ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಮಂಗಳವಾರ ರೋಶನ್ ಬೇಗ್ ರಾಜೀನಾಮೆ ನೀಡಿದ್ದರು. ಈ ಇಬ್ಬರು ಶಾಸಕರನ್ನು ಮನವೊಲಿಕೆ ಮಾಡಿ ಮತ್ತೆ ಸರ್ಕಾರವನ್ನು ಸುಭದ್ರಗೊಳಿಸುವ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.