ADVERTISEMENT

ಯಡಿಯೂರಪ್ಪಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಬುದ್ಧಿ ಕೊಟ್ಟಿರಬಹುದು: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2019, 8:41 IST
Last Updated 10 ಫೆಬ್ರುವರಿ 2019, 8:41 IST
ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್‌.ಯಡಿಯೂರಪ್ಪ
ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ‘ಆಡಿಯೊ ವಿಚಾರದ ಬಗ್ಗೆ ತಪ್ಪೊಪ್ಪಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಹುಶಧರ್ಮಸ್ಥಳ ಮಂಜುನಾಥ ಸ್ವಾಮಿ ಬುದ್ಧಿ ಕೊಟ್ಟಿರಬಹುದು’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

‘ಮೊನ್ನೆ ಆಡಿಯೊ ಬಗ್ಗೆ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ಅದರಲ್ಲಿಮಾತನಾಡಿರುವುದು ನಾನಲ್ಲ. ಅದು ಮಿಮಿಕ್ರಿ ಮಾಡಲಾಗಿದೆ ಎಂದು ಹೇಳಿದ್ದರು. ಆದರೆ ಇಂದು ನಾನೇ ಮಾತನಾಡಿದ್ದು ಎಂದು ಹೇಳುತ್ತಾರೆ. ಈ ಕುರಿತು ಸದನದಲ್ಲಿ ಚರ್ಚಿಸಲು ಸಿದ್ಧನಿದ್ದೇನೆ’ ಎಂದರು.

ADVERTISEMENT

ಇದೇ ವೇಳೆ ಎಂಎಲ್‌ಸಿ ಸ್ಥಾನಕ್ಕೆ ₹25 ಕೋಟಿ ಹಣ ಕೇಳಿದ್ದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ‘ಇದು ನಮ್ಮ ಪಕ್ಷದ ಅಂತರಿಕ ವಿಚಾರ’ ಎಂದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.