ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬದ ದಿನದಂದೇಸರ್ಕಾರಿ ನಿವಾಸ ಕಾವೇರಿಗೆ ಪೂಜೆ ಸಲ್ಲಿಸಿ, ಪ್ರವೇಶಿಸಿದರು.
ಇಲ್ಲಿಯವರೆಗೂ ಯಡಿಯೂರಪ್ಪ ಅವರುಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಸ್ವಂತ ಮನೆ ಧವಳಗಿರಿಯಲ್ಲಿದ್ದರು.
ಆರು ವರ್ಷಗಳಿಗೂ ಹೆಚ್ಚು ಅವಧಿವರೆಗೆಕಾಂಗ್ರೆಸ್ ಮುಖಂಡಸಿದ್ದರಾಮಯ್ಯ ಅವರುಸರ್ಕಾರಿ ಬಂಗಲೆ ‘ಕಾವೇರಿ’ಯಲ್ಲಿ ನೆಲೆಸಿದ್ದು, ಜನವರಿ 29ರಂದು ಅದನ್ನುತೊರೆದು,ಕುಮಾರಕೃಪಾ–1ಕ್ಕೆ ತಮ್ಮ ನಿವಾಸ ಬದಲಿಸಿದ್ದರು.
ಮುಖ್ಯಮಂತ್ರಿಯಾಗಿದ್ದಾಗ‘ಕಾವೇರಿ’ಯನ್ನುವಾಸ್ತವ್ಯಕ್ಕೆಸಿದ್ದರಾಮಯ್ಯ ಅವರುಹಂಚಿಕೆ ಮಾಡಿಕೊಂಡಿದ್ದರು. 2018ರ ವಿಧಾನಸಭೆ ಚುನಾವಣೆ ಬಳಿಕ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಅವರು, ಸಚಿವ ಸ್ಥಾನಮಾನ ಸಿಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಕೆಲದಿನ ಅಲ್ಲಿಯೇ ತಮ್ಮ ವಾಸ್ತವ್ಯ ಮುಂದುವರಿಸಿದ್ದರು.
ಮೈತ್ರಿ ಸರ್ಕಾರದ ಅವಧಿಯಲ್ಲಿ ‘ಕಾವೇರಿ’ಯನ್ನು ಬಿಟ್ಟುಕೊಡಬೇಕಾದ ಸಂದರ್ಭ ಎದುರಾದಾಗ ಅಂದು ಸಚಿವರಾಗಿದ್ದ ಕೆ.ಜೆ. ಜಾರ್ಜ್ ಅವರ ಹೆಸರಿಗೆ ಹಂಚಿಕೆ ಮಾಡಿಸಿಕೊಂಡು ಅಲ್ಲಿಯೇ ಉಳಿದುಕೊಂಡಿದ್ದರು.
ಬಿಜೆಪಿ ಸರ್ಕಾರ ಬರುತ್ತಿದ್ದಂತೆ ವಿರೋಧ ಪಕ್ಷದ ನಾಯಕರಾದ ಅವರು, ಅದೇ ನಿವಾಸವನ್ನು ತಮಗೆ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ಇಲ್ಲಿಂದ ಶುರುವಾಗಿದ್ದ ನಿವಾಸದ ಜಟಾಪಟಿ ಕಳೆದ ತಿಂಗಳು ಮುಕ್ತಾಯವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.