ನವದೆಹಲಿ: 11 ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸಂಸತ್ ಭವನದಲ್ಲಿ ಶಾ ಭೇಟಿ ಮಾಡಿ ಹೊರಬಂದ ಬಳಿಕಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಭೆಯಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಮ್ಮ ಬೇಡಿಕೆಗೆ ಸಮ್ಮತಿ ಸಿಕ್ಕಿದೆ.ನಾನು ನೀಡಿದ ಸಂಭಾವ್ಯ ಸಚಿವರ ಪಟ್ಟಿಗೆ ಹೈಕಮಾಂಡ್ ಬಹುತೇಕ ಒಪ್ಪಿಗೆ ಸೂಚಿಸಿದ್ದು, ನಾನು ಹರ್ಷದಿಂದ ಹೊರಬಂದಿದ್ದೇನೆ. ಸೋಮವಾರ ಸಂಪುಟ ವಿಸ್ತರಣೆ ಮಾಡಲಾಗುವುದು‘ ಎಂದು ಹೇಳಿದರು.
ಸಂಪುಟ ವಿಸ್ತರಣೆ ಬಗ್ಗೆ ಅರ್ಧ ಗಂಟೆ ಕಾಲ ವಿಸ್ತೃತ ಚರ್ಚೆ ನಡೆಸಲಾಯಿತು. ಹನ್ನೊಂದು ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ ಎಂದರು.
ಇದೇ ವೇಳೆ ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.