ADVERTISEMENT

ಮುಖ್ಯಮಂತ್ರಿ ಬರುವುದಕ್ಕೂ ಮುನ್ನವೇ ಹೊರಟು ಹೋದ ಬಿಜೆಪಿ ಶಾಸಕ ಉಮೇಶ್‌ ಕತ್ತಿ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2020, 6:30 IST
Last Updated 15 ಮಾರ್ಚ್ 2020, 6:30 IST
ಬಿಜೆಪಿ ಹಿರಿಯ ಶಾಸಕ ಉಮೇಶ್‌ ಕತ್ತಿ
ಬಿಜೆಪಿ ಹಿರಿಯ ಶಾಸಕ ಉಮೇಶ್‌ ಕತ್ತಿ   

ಬೆಳಗಾವಿ: ಸಚಿವ ಸ್ಥಾನ ಸಿಗದಿರುವುದರಿಂದ ಮುನಿಸಿಕೊಂಡಿರುವ ಹಿರಿಯ ಶಾಸಕ ಉಮೇಶ ಕತ್ತಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗದೇ ಹೋಗಿದ್ದು ಅಚ್ಚರಿಗೆ ಕಾರಣವಾಯಿತು.

ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಅವರ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಮುಖ್ಯಮಂತ್ರಿ ಇನ್ನೇನು ಬರುತ್ತಿದ್ದಾರೆ ಎನ್ನುವಾಗಲೇ ಅಲ್ಲಿಂದ ಹೊರಟರು.

ಈ ಕುರಿತು ಪ್ರತಿಕ್ರಿಯಿಸಿದ ಕತ್ತಿ, ಮುಖ್ಯಮಂತ್ರಿ ಜೊತೆ ನನಗೇನೂ ಮುನಿಸಿಲ್ಲ. ಅವರು ನಮ್ಮ ನಾಯಕರು. ಈ ಸರ್ಕಾರದಲ್ಲೇ ಮಂತ್ರಿಯಾಗುತ್ತೇನೆ. ಇನ್ನೂ ಹಲವು ವರ್ಷಗಳಷ್ಟು ರಾಜಕೀಯ ‌ಜೀವನ ಇದೆ. ಮುಖ್ಯಮಂತ್ರಿಯೂ ಆಗುತ್ತೇನೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.