ಬಾಗಲಕೋಟೆ: ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಆಗಿ ಇಲ್ಲಿನ ರಬಕವಿ ಪಟ್ಟಣದ ರಾಜೇಂದ್ರ ಬಾದಾಮಿಕರ್ ಅವರನ್ನು ಶುಕ್ರವಾರ ಸುಪ್ರೀಂಕೋರ್ಟ್ ನೇಮಕ ಮಾಡಿದೆ.
ಸದ್ಯ ಅವರು ಬೆಂಗಳೂರಿನಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆಗಿ ಕೆಲಸ ಮಾಡುತ್ತಿದ್ದರು. ರಾಜೇಂದ್ರ ಅವರು ಈ ಮೊದಲು ಮೈಸೂರು, ಕೋಲಾರ ಹಾಗೂ ತುಮಕೂರು ಜಿಲ್ಲಾ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರಾಗಿ ಕೆಲಸ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.