ADVERTISEMENT

ಧರ್ಮಸ್ಥಳ: ಇಂದು ಬಾಹುಬಲಿ ಮಸ್ತಕಾಭಿಷೇಕ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2019, 19:26 IST
Last Updated 15 ಫೆಬ್ರುವರಿ 2019, 19:26 IST
ಧರ್ಮಸ್ಥಳದ ಬಾಹುಬಲಿ ಮೂರ್ತಿ
ಧರ್ಮಸ್ಥಳದ ಬಾಹುಬಲಿ ಮೂರ್ತಿ   

ಉಜಿರೆ: ಧರ್ಮಸ್ಥಳದ ರತ್ನಗಿರಿಯಲ್ಲಿ ಬಾಹುಬಲಿಗೆ ನಾಲ್ಕನೇ ಮಹಾಮಸ್ತಕಾಭಿಷೇಕ ಶನಿವಾರ ಬೆಳಿಗ್ಗೆ 8.45ರ ಮೀನ ಲಗ್ನದಲ್ಲಿ ನಡೆಯಲಿದೆ.

ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬಸ್ಥರಿಂದ ಶನಿವಾರ ಬೆಳಿಗ್ಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಬಾಹುಬಲಿಗೆ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ ನೆರವೇರಲಿದೆ.

ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಿದ್ದು, ರತ್ನಗಿರಿಗೆ ಹೋಗಿ ಮಹಾಮಸ್ತಕಾಭಿಷೇಕ ನೋಡಲು ಉಚಿತ ವಾಹನ ಸೌಲಭ್ಯ ಕಲ್ಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.