ADVERTISEMENT

ಬೆಳಗಾವಿಯಲ್ಲಿ ಬಂಡಾಯ ಸಾಹಿತ್ಯ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2019, 19:32 IST
Last Updated 7 ಫೆಬ್ರುವರಿ 2019, 19:32 IST

ಬೆಂಗಳೂರು: ಕರ್ನಾಟಕ ಬಂಡಾಯ ಸಾಹಿತ್ಯ ಸಂಘಟನೆಗೆ ನಲವತ್ತು ವರ್ಷಗಳು ತುಂಬಿದ ಪ್ರಯುಕ್ತ ಇದೇ ಮಾರ್ಚ್ 9 ಮತ್ತು 10ರಂದು ಬೆಳಗಾವಿಯಲ್ಲಿ ‘ಸೈದ್ಧಾಂತಿಕ ಅನುಸಂಧಾನ’ ಎಂಬ ರಾಜ್ಯಮಟ್ಟದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ಯುವಪೀಳಿಗೆಗೆ ದೇಶದಲ್ಲಿ ಪ್ರಚಲಿತವಿರುವ ವಿವಿಧ ಸೈದ್ಧಾಂತಿಕ ವಾದಗಳನ್ನು ಪರಿಚಯಿಸಿ, ಚರ್ಚಿಸುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಅಂಬೇಡ್ಕರ್ ವಾದ, ಗಾಂಧಿವಾದ, ಮಾರ್ಕ್ಸ್‌ವಾದ, ಲೋಹಿಯಾವಾದ, ಸ್ತ್ರೀವಾದ ಮತ್ತು ವಿಚಾರವಾದಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ವಿಷಯ ಮಂಡನೆಯಾಗಲಿವೆ. ಈ ವಾದಗಳ ಪರಸ್ಪರ ಅನುಸಂಧಾನದ ಅಗತ್ಯವನ್ನು ಈ ಕಾರ್ಯಾಗಾರದಲ್ಲಿ ಮನವರಿಕೆ ಮಾಡಿಕೊಡುವ ಆಶಯ ಕಾರ್ಯಾಗಾರದ್ದು.

ಪತ್ರಕರ್ತ ಆರ್.ಜಿ.ಹಳ್ಳಿ ನಾಗರಾಜ್ ಕಾರ್ಯಾಗಾರದ ನಿರ್ದೇಶಕರಾಗಿರುತ್ತಾರೆ. ಪ್ರತಿನಿಧಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗುವುದು. ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಆಸಕ್ತರು ಡಾ.ವೈ.ಬಿ.ಹಿಮ್ಮಡಿ (92422 90846) ಅಥವಾ ಡಾ.ನಾಗರಾಜು (94496 11569) ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದು ಎಂದು ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಪ್ರೊ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.