ADVERTISEMENT

ಕೇಂದ್ರ ವಲಯ ಐಜಿಪಿಯಾಗಿ ಸೀಮಂತ್‌‌ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 13:48 IST
Last Updated 27 ಜೂನ್ 2020, 13:48 IST
ಕೇಂದ್ರ ವಿಭಾಗದ ನಿರ್ಗಮಿತ  ಐಜಿಪಿ ಶರತ್ ಚಂದ್ರ ಅವರು ನೂತನ ಐಜಿಪಿ ಸೀಮಂತ್‌ಕುಮಾರ್ ಸಿಂಗ್ ಅವರಿಗೆ ಹೂಗುಚ್ಛ ನೀಡಿದರು.
ಕೇಂದ್ರ ವಿಭಾಗದ ನಿರ್ಗಮಿತ ಐಜಿಪಿ ಶರತ್ ಚಂದ್ರ ಅವರು ನೂತನ ಐಜಿಪಿ ಸೀಮಂತ್‌ಕುಮಾರ್ ಸಿಂಗ್ ಅವರಿಗೆ ಹೂಗುಚ್ಛ ನೀಡಿದರು.   

ಬೆಂಗಳೂರು: ಕೇಂದ್ರ ವಲಯ ಐಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್‌ಕುಮಾರ್ ಸಿಂಗ್ ಅವರು ಶನಿವಾರ ಅಧಿಕಾರ ವಹಿಸಿಕೊಂಡರು. ಇವರಿಗೆ ಹಿರಿಯ ಐಪಿಎಸ್ ಅಧಿಕಾರಿ ಐಜಿಪಿ ಶರತ್‌ಚಂದ್ರ ಅವರು ಹೂಗುಚ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಶರತ್‌ಚಂದ್ರ ಅವರು ಕೇಂದ್ರ ಕಚೇರಿಯ ಆಡಳಿತ ವಿಭಾಗದ ಐಜಿಪಿಯಾಗಿ ವರ್ಗಾವಣೆಯಾಗಿದ್ದಾರೆ. ಮಂಗಳೂರು, ಬೆಳಗಾವಿ ಪೊಲೀಸ್ ಆಯುಕ್ತರು ಸೇರಿದಂತೆ 13 ಮಂದಿ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಶುಕ್ರವಾರ ರಾತ್ರಿಯೇ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

ಕೇಂದ್ರ ವಲಯ ಐಜಿಪಿಯವರ ವ್ಯಾಪ್ತಿಯಲ್ಲಿ ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಕೆಜಿಎಫ್, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಇದ್ದು, ಈ ಜಿಲ್ಲೆಗಳ ಎಸ್ಪಿಗಳ ಉಸ್ತುವಾರಿಯೂ ಐಜಿಪಿಯವರಿಗೆ ಸೇರಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.