ವಂದೇ ಭಾರತ್ ಎಕ್ಸ್ಪ್ರೆಸ್ ರೈಲು
ನವದೆಹಲಿ: ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 31ರಂದು ಮಧ್ಯಾಹ್ನ 12.30 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಲಿದ್ದಾರೆ.
ಮೀರತ್ - ಲಖನೌ ; ಮಧುರೈ - ಬೆಂಗಳೂರು ಮತ್ತು ಚೆನ್ನೈ – ನಾಗರಕೋಯಿಲ್ ನಡುವೆ ಈ ರೈಲುಗಳು ಸಂಚಾರ ಮಾಡಲಿವೆ. ಮಧುರೈ - ಬೆಂಗಳೂರು ವಂದೇ ಭಾರತ್ ರೈಲು ಸುಮಾರು 1 ಗಂಟೆ 30 ನಿಮಿಷಗಳ ಪ್ರಯಾಣದ ಸಮಯ ಉಳಿತಾಯ ಮಾಡುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.