ಹುಬ್ಬಳ್ಳಿ: ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲನ್ನು ಒಂದು ವಾರದಲ್ಲಿ ಆರಂಭಿಸಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ನೈರುತ್ಯ ರೈಲ್ವೆ ವಲಯದ ಪ್ರಧಾನವ್ಯವಸ್ಥಾಪಕ ಎ.ಕೆ. ಸಿಂಗ್ ಅವರಿಗೆ ಸೂಚಿಸಿದ್ದಾರೆ.
ಭಾನುವಾರ ಇಲ್ಲಿ ನೈರುತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳೊಂದಿಗೆಸಭೆ ನಡೆಸಿದ ಅವರು ‘ಜನರ ಬೇಡಿಕೆ ನೋಡಿಕೊಂಡು ಮುಂದೆ ಈ ರೈಲನ್ನು ಕಾಯಂ ಮಾಡಲಾಗುವುದು’ ಎಂದರು.
ಬೆಂಗಳೂರಿನಿಂದ ರಾತ್ರಿ 9ಕ್ಕೆ ಹೊರಡುವ ರೈಲು ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ರಾತ್ರಿ 9ಕ್ಕೆ ಹೊರಟು ಮರುದಿನ ಬೆಳಿಗ್ಗೆ 7.30ಕ್ಕೆ ಬೆಂಗಳೂರು ಮುಟ್ಟಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.