ಚಿತ್ರದುರ್ಗ: ಸಂಗೀತ ನಿರ್ದೇಶಕ ರಾಜನ್ ಹಾಗೂ ‘ಡಾ.ರಾಜಕುಮಾರ್ ಸಮಗ್ರ ಚರಿತ್ರೆ’ಯ ಲೇಖಕ ದೊಡ್ಡಹುಲ್ಲೂರು ರುಕ್ಕೋಜಿ ಅವರನ್ನು ‘ಬರಗೂರು ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.
ಡಾ.ಬರಗೂರು ಪ್ರತಿಷ್ಠಾನ ಪ್ರದಾನ ಮಾಡುವ ಈ ಪ್ರಶಸ್ತಿ ₹ 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.
ಬರಗೂರು ರಾಮಚಂದ್ರಪ್ಪ ಅವರ ಪತ್ನಿ ರಾಜಲಕ್ಷ್ಮಿ ಅವರ ಹೆಸರಿನಲ್ಲಿ ಪ್ರದಾನ ಮಾಡುವ ಪ್ರಶಸ್ತಿಗೆ ಡಾ.ಕೆ.ಎಸ್. ಕುಮಾರಸ್ವಾಮಿ, ಚೀಮನಹಳ್ಳಿ ರಮೇಶ್ ಬಾಬು ಹಾಗೂ ಶ್ರೀಧರ್ ಬನವಾಸಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ₹ 10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.
ಜ.20ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.