ADVERTISEMENT

ನನ್ನ ಕರೆನ್ಸಿ ಖಾಲಿ, ಯಾರ ಕರೆಯೂ ಬಂದಿಲ್ಲ: ಬಸನಗೌಡ ಪಾಟೀಲ ಯತ್ನಾಳ ನಿರಾಸೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2021, 14:39 IST
Last Updated 12 ಜನವರಿ 2021, 14:39 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ವಿಜಯಪುರ: ‘ನನ್ನ ಮೊಬೈಲ್ ಫೋನ್‌‌ ಕರೆನ್ಸಿ ಖಾಲಿಯಾಗಿದೆ, ಯಾರ ಕರೆಯೂ ಬಂದಿಲ್ಲ’ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಖ್ಯಮಂತ್ರಿಯಿಂದ ಕರೆ ಬಂದಿಲ್ಲ, ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತಿಲ್ಲ ಎಂದು ಪರೋಕ್ಷವಾಗಿ ನಿರಾಸೆ ವ್ಯಕ್ತಪಡಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಿಮಗೆ ಮುಖ್ಯಮಂತ್ರಿಯಿಂದ ಕರೆ ಬಂದಿದೆಯಾ? ಬೆಂಗಳೂರಿಗೆ ಹೋಗುತ್ತಿದ್ದೀರಾ? ಎಂಬ ಪತ್ರಕರ್ತರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ‘ಬೆಂಗಳೂರಿನಲ್ಲಿ ನನಗೇನೂ ಕೆಲಸ ಇಲ್ಲ, ಅಲ್ಲಿಗೆ ನಾನು ಹೋಗುತ್ತಿಲ್ಲ’ ಎಂದು ಹೇಳಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT