ಬೆಂಗಳೂರು: ಉದ್ಯಮಿಗಳೊಂದಿಗೆ ನಡೆದ ಸರ್ಕಾರಿ ಸಭೆಯಲ್ಲಿ ನಿಮ್ಮ ಪುತ್ರನದ್ದೇನು ಪಾತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಉದ್ಯಮಿಗಳೊಂದಿಗೆ ನಡೆದ ಸಭೆಯ ಚಿತ್ರವನ್ನು ಹಂಚಿಕೊಂಡಿದೆ. ಆ ಚಿತ್ರದಲ್ಲಿ ಸಿಎಂ ಬೊಮ್ಮಾಯಿ ಅವರ ಪುತ್ರನ ಮುಖವನ್ನು ಗುರುತು ಮಾಡಲಾಗಿದೆ.
'ಉದ್ಯಮಿಗಳೊಂದಿಗಿನ ಸರ್ಕಾರಿ ಸಭೆಯಲ್ಲಿ ನಿಮ್ಮ ಪುತ್ರನದ್ದೇನು ಪಾತ್ರ ಬೊಮ್ಮಾಯಿ ಅವರೇ? ಕುಟುಂಬ ರಾಜಕಾರಣದ ಪರಂಪರೆ ಮುಂದುವರೆಸುವ ಇರಾದೆಯೇ? ಯಡಿಯೂರಪ್ಪನವರ ಅಧಿಕಾರದಲ್ಲಿ ಬಿ.ವೈ.ವಿಜಯೇಂದ್ರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡಿದ್ದರು. ಈಗ ತಾವೂ ಅದೇ ದಾರಿಯಲ್ಲಿ ಹೊರಟಿರುವಿರಾ' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ದೃತರಾಷ್ಟ್ರಪ್ರೇಮ ಒಳ್ಳೆಯದಲ್ಲ ಎಂದೂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.