ಬೆಂಗಳೂರು: ಶಾಸಕ ಅರವಿಂದ ಬೆಲ್ಲದ್ ಅವರ ದೂರವಾಣಿಕೆ ಕದ್ದಾಲಿಕೆಯ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ತಮ್ಮ ಫೋನ್ ಕದ್ದಾಲಿಕೆ ಆಗುತ್ತಿದೆ ಎಂದು ಅವರು ವಿಧಾನಸಭಾಧ್ಯಕ್ಷರಿಗೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕಾರಣ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತರು ತನಿಖೆಗೆ ಆದೇಶ ಮಾಡಿದ್ದಾರೆ ಎಂದು ಬೊಮ್ಮಾಯಿ ಸುದ್ದಿಗಾರರಿಗೆ ಹೇಳಿದರು.
ಇದನ್ನೂ ಓದಿ... ನನ್ನ ಫೋನ್ ಕರೆ ಕದ್ದಾಲಿಕೆಯಾಗುತ್ತಿದೆ: ಶಾಸಕ ಅರವಿಂದ್ ಬೆಲ್ಲದ್ ಆರೋಪ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.