ADVERTISEMENT

ಉಸ್ತುವಾರಿ ಸಚಿವರ ನೇಮಕದಲ್ಲಿ ಗೊಂದಲವಿಲ್ಲ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2021, 15:27 IST
Last Updated 21 ಆಗಸ್ಟ್ 2021, 15:27 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ವಿಷಯದಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಆನಂದ್ ಸಿಂಗ್‌ ನಿರಂತರವಾಗಿ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಯಾವುದೇ ಗೊಂದಲಕ್ಕೆ ಅವಕಾಶ ಕೊಡದೆ ಉಸ್ತುವಾರಿಗಳನ್ನು ನೇಮಕ ಮಾಡಲಾಗುವುದು. ಸದ್ಯಕ್ಕೆ ಉಸ್ತುವಾರಿಗಳ ನೇಮಕದ ಬಗ್ಗೆ ಚಿಂತನೆ ಮಾಡಿಲ್ಲ’ ಎಂದರು.

‘ಮುಖ್ಯಮಂತ್ರಿಯಾದ ಬಳಿಕ ಹುಬ್ಬಳ್ಳಿಗೆ ಎರಡನೇ ಸಾರಿ ಬಂದಿರುವೆ. ಇಲ್ಲಿಗೆ ಬಂದರೆ ಎಲ್ಲರನ್ನೂ ಭೇಟಿಯಾಗಲು ಅವಕಾಶ ಸಿಗುತ್ತದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಚರ್ಚಿಸಿ ಹುಬ್ಬಳ್ಳಿಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.

ADVERTISEMENT

ಮಹಾನಗರ ಪಾಲಿಕೆ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ ‘ಚುನಾವಣೆಯನ್ನು ಸ್ಥಳೀಯ ನಾಯಕರೇ ನೋಡಿಕೊಳ್ಳುತ್ತಾರೆ. ಹುಬ್ಬಳ್ಳಿ–ಧಾರವಾಡ ಪಾಲಿಕೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಲ್ಹಾದ ಜೋಶಿ ಅವರ ಸಹೋದರ ಗೋವಿಂದ ಜೋಶಿ ಅವರ ಪುತ್ರನ ವಿವಾಹ ಭಾನುವಾರ ನಗರದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಭಾಗಿಯಾಗಲಿದ್ದಾರೆ. ಅದಕ್ಕಾಗಿ ಶನಿವಾರ ರಾತ್ರಿ ಇಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.