ADVERTISEMENT

ಸಚಿವ ಸ್ಥಾನಕ್ಕೆ ಲಾಬಿ ಮಾಡಲ್ಲ: ಬಸವರಾಜ ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2018, 7:29 IST
Last Updated 21 ನವೆಂಬರ್ 2018, 7:29 IST
   

ಶಿರಸಿ: 'ಸಚಿವಸ್ಥಾನದ ಬಗ್ಗೆ ನಾನು ಆಶಾವಾದಿಯೂ ಅಲ್ಲ, ನಿರಾಶಾವಾದಿಯೂ ಅಲ್ಲ' ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನನಗೆ ಸಾಮರ್ಥ್ಯವಿದೆ. ನಾನ್ಯಾಕೆ ಲಾಬಿ ಮಾಡಬೇಕು ? ನಾನು ಸತ್ತರೂ ಸಚಿವ ಸ್ಥಾನಕ್ಕೆ ಲಾಬಿ ಮಾಡುವುದಿಲ್ಲ' ಎಂದರು.

'ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿವೆ. ಶಿಕ್ಷಣ ಕ್ಷೇತ್ರದಲ್ಲಿ ಕಾಳಜಿ ಇದ್ದವರಿಗೆ ಸಚಿವ ಸ್ಥಾನ ನೀಡಬೇಕು' ಎಂದು ಅಭಿಪ್ರಾಯಪಟ್ಟರು.

ADVERTISEMENT

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ಅದರದೇ ಆದ ಸಮಸ್ಯೆಗಳಿರುತ್ತವೆ. ಸಾಕಷ್ಟು ಜನರು ಸಚಿವ ಸ್ಥಾನದ ಆಕಾಂಕ್ಷಿಗಳಿರುತ್ತಾರೆ. ಲಾಬಿ ಮಾಡುವುದರಲ್ಲಿ ಅರ್ಥವಿಲ್ಲ ಎಂದರು.

ಉತ್ತರ ಕರ್ನಾಟಕ ಭಾಗದಿಂದ 96ಕ್ಕೂ ಹೆಚ್ಚು ಶಾಸಕರು ಆಯ್ಕೆಯಾಗಿದ್ದಾರೆ. ಇದನ್ನು ಗಮನಿಸಿ ಉತ್ತರ ಕರ್ನಾಟಕದ ಮಂದಿಗೆ ಆದ್ಯತೆ ನೀಡುವ ವಿಶ್ವಾಸವಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.