ADVERTISEMENT

ಯಾವ ಖಾತೆ ನೀಡಿದರೂ ನಿಭಾಯಿಸುವೆ: ಬೈರತಿ ಬಸವರಾಜು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2019, 19:19 IST
Last Updated 10 ಡಿಸೆಂಬರ್ 2019, 19:19 IST
ಶಾಸಕ ಬೈರತಿ ಬಸವರಾಜ್ ಅವರನ್ನು ಕ್ಷೇತ್ರದ ಮುಖಂಡರು ಸನ್ಮಾನಿಸಿದರು. ಕಲ್ಕೆರೆ ಕೃಷ್ಣಮೂರ್ತಿ, ಶಾಂತಾ ಕೃಷ್ಣಮೂರ್ತಿ ಇದ್ದರು
ಶಾಸಕ ಬೈರತಿ ಬಸವರಾಜ್ ಅವರನ್ನು ಕ್ಷೇತ್ರದ ಮುಖಂಡರು ಸನ್ಮಾನಿಸಿದರು. ಕಲ್ಕೆರೆ ಕೃಷ್ಣಮೂರ್ತಿ, ಶಾಂತಾ ಕೃಷ್ಣಮೂರ್ತಿ ಇದ್ದರು   

ಕೆ.ಆರ್.ಪುರ: ‘ಬೆಂಗಳೂರು ನಗರಾಭಿವೃದ್ಧಿ ಖಾತೆ ಸೇರಿದಂತೆ ಯಾವುದೇ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ’ ಎಂದು ನೂತನ ಶಾಸಕ ಬೈರತಿ ಬಸವರಾಜ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿಯ ಎಲ್ಲ ಶಾಸಕರಿಗೆ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

‘ನಗರಾಭಿವೃದ್ಧಿಯ ಕುರಿತು ಹೆಚ್ಚು ಅನುಭವವಿದೆ. ಇದಲ್ಲದೆ, ಬೇರೆ ಯಾವುದೇ ಖಾತೆ ನೀಡಿದರೂ ಸಮರ್ಥ
ವಾಗಿ ನಿಭಾಯಿಸುತ್ತೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.