ADVERTISEMENT

ನನ್ನ ಬಗ್ಗೆ ವರಿಷ್ಠರಿಗೆ ಸದಭಿಪ್ರಾಯವಿಲ್ಲ: ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2019, 17:52 IST
Last Updated 13 ಜನವರಿ 2019, 17:52 IST

ಹುಬ್ಬಳ್ಳಿ: ‘ಈ ಭಾಗದಲ್ಲಿ ನಾನು ಪಕ್ಷ ಸಂಘಟನೆ ಮಾಡಿಲ್ಲ, ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದೇನೆ ಎಂದು ಕೆಲವು ಮುಖಂಡರು ದೂರು ನೀಡಿರುವುದರಿಂದ ನನ್ನ ಬಗ್ಗೆ ಪಕ್ಷದ ವರಿಷ್ಠರಿಗೆ ಸದಭಿಪ್ರಾಯವಿಲ್ಲ’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಭಾನುವಾರ ಇಲ್ಲಿ ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್‌ ಜಿಲ್ಲಾ ಘಟಕದ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ನಾನು ಎಂದಿಗೂ ಪಕ್ಷಕ್ಕೆ ದ್ರೋಹ ಮಾಡಿಲ್ಲ, ಮುಂದೆಯೂ ಮಾಡಲ್ಲ. ಎಂತಹ ಪರಿಸ್ಥಿತಿಯಲ್ಲೂ ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಪ್ರಾಮಾಣಿಕವಾಗಿ ಇದ್ದೇನೆ’ ಎಂದು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT