ADVERTISEMENT

ಸಾಹಿತಿಚಂಪಾಗೆ ಬಸವಶ್ರೀ ಪ್ರಶಸ್ತಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2019, 20:15 IST
Last Updated 22 ಏಪ್ರಿಲ್ 2019, 20:15 IST
ಪ್ರೊ.ಚಂದ್ರಶೇಖರ ಪಾಟೀಲ
ಪ್ರೊ.ಚಂದ್ರಶೇಖರ ಪಾಟೀಲ   

ಚಿತ್ರದುರ್ಗ: ಇಲ್ಲಿನ ಮುರುಘಾ ಮಠ ಪ್ರದಾನ ಮಾಡುವ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಬಸವ ಜಯಂತಿಯ ಅಂಗವಾಗಿ ಮೇ 7ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

‘ಸಾಹಿತ್ಯ ಕ್ಷೇತ್ರಕ್ಕೆ ಚಂಪಾ ಅವರು ನೀಡಿದ ಕೊಡುಗೆ ಅನನ್ಯ. ಕನ್ನಡ ಕಟ್ಟುವ ಕೆಲಸದಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದಾರೆ. ವೈಚಾರಿಕತೆಗೆ ಒತ್ತಾಸೆಯಾಗಿ ನಿಂತು ಚಳವಳಿ ರೂಪಿಸಿದ್ದಾರೆ’ ಎಂದರು.

ADVERTISEMENT

‘ಹಾಸ್ಯ, ವಿಡಂಬನೆ, ನೇರ– ನಿಷ್ಠುರ ನಡೆಗೆ ಮಾದರಿಯಾಗಿದ್ದಾರೆ. 2018ನೇ ಸಾಲಿನ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿದ್ದು ಮಠಕ್ಕೂ ಸಂತಸ ತಂದಿದೆ’ ಎಂದು ಶಿವಮೂರ್ತಿ ಮುರುಘಾ ಶರಣರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.