ADVERTISEMENT

ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ: ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 19:30 IST
Last Updated 21 ಜನವರಿ 2022, 19:30 IST
ಸಚಿವ ವಿ.ಸೋಮಣ್ಣ ಹಾಗೂ ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷೆ ಶೈಲಜಾ ಅವರು ಶಿವಕುಮಾರ ಸ್ವಾಮೀಜಿಯವರ ಪುಣ್ಯಸ್ಮರಣೆ ಪ್ರಯುಕ್ತ ಮಕ್ಕಳಿಗೆ ಅನ್ನಸಂತರ್ಪಣೆ ಮಾಡಿದರು. ಗೋವಿಂದರಾಜನಗರ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥಗೌಡ, ಮುಖಂಡರಾದ ದಾಸೇಗೌಡ, ಕೆ.ಉಮೇಶ್‌ ಶೆಟ್ಟಿ, ಮೋಹನ್ ಕುಮಾರ್‌, ಪಾಲನೇತ್ರ, ಕೊಳಚೆ ನಿರ್ಮೂಲನ ಮಂಡಳಿ ನಿರ್ದೇಶಕ ಕ್ರಾಂತಿರಾಜು, ರಾಜಪ್ಪ ಇದ್ದರು. 
ಸಚಿವ ವಿ.ಸೋಮಣ್ಣ ಹಾಗೂ ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷೆ ಶೈಲಜಾ ಅವರು ಶಿವಕುಮಾರ ಸ್ವಾಮೀಜಿಯವರ ಪುಣ್ಯಸ್ಮರಣೆ ಪ್ರಯುಕ್ತ ಮಕ್ಕಳಿಗೆ ಅನ್ನಸಂತರ್ಪಣೆ ಮಾಡಿದರು. ಗೋವಿಂದರಾಜನಗರ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥಗೌಡ, ಮುಖಂಡರಾದ ದಾಸೇಗೌಡ, ಕೆ.ಉಮೇಶ್‌ ಶೆಟ್ಟಿ, ಮೋಹನ್ ಕುಮಾರ್‌, ಪಾಲನೇತ್ರ, ಕೊಳಚೆ ನಿರ್ಮೂಲನ ಮಂಡಳಿ ನಿರ್ದೇಶಕ ಕ್ರಾಂತಿರಾಜು, ರಾಜಪ್ಪ ಇದ್ದರು.    

ಬೆಂಗಳೂರು: ‘ಮುಂದಿನ ಮೂರು ತಿಂಗಳೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ’ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮೂಡಲಪಾಳ್ಯ ವಾರ್ಡ್‌ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿವಕುಮಾರ ಸ್ವಾಮೀಜಿಯವರು ನಾಗರಿಕ ಸಮಾಜದಲ್ಲಿನ ಅಂಧಕಾರವನ್ನು ತೊಲಗಿಸಿ ವಿದ್ಯೆಯೆಂಬ ಬೆಳಕು ನೀಡಿದವರು. ಇಡೀ ವಿಶ್ವಕ್ಕೆ ದಾಸೋಹದ ಮಹತ್ವ ಸಾರಿದ್ದವರು. ಶಿವಕುಮಾರ ಸ್ವಾಮೀಜಿ ಹಾಗೂ ಬಾಲಗಂಗಾಧರನಾಥ ಸ್ವಾಮೀಜಿಯವರ ಆಶೀರ್ವಾದದಿಂದಾಗಿ ನಾನು ರಾಜಕೀಯ ಕ್ಷೇತ್ರದಲ್ಲಿ ದೊಡ್ಡ ಸ್ಥಾನಗಳನ್ನು ಅಲಂಕರಿಸಲು ಸಾಧ್ಯವಾಯಿತು. ಅವರಿಬ್ಬರು ಮಹಾನ್‌ ತಪಸ್ವಿಗಳು. ಶಿವಕುಮಾರ ಸ್ವಾಮೀಜಿಯವರ ಆದರ್ಶವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಆಳವಡಿಕೊಂಡು ಎಲ್ಲರ ಪ್ರೀತಿ ವಿಶ್ವಾಸ ಗಳಿಸಬೇಕು’ ಎಂದರು.

ADVERTISEMENT

‘ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅರುಂದತಿನಗರದಲ್ಲಿ ಕನಕಭವನ ನಿರ್ಮಾಣ ಮಾಡಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಐಎಎಸ್‌ ಹಾಗೂ ಐಪಿಎಸ್‌ ತರಬೇತಿ ಕೇಂದ್ರ ಆರಂಭಿಸಲಾಗುತ್ತಿದೆ. ಮಾನಸನಗರದಲ್ಲಿ 295 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸಲಾಗುತ್ತಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.