ADVERTISEMENT

ಬಿಎಸ್‌ವೈ– ಬಿ.ಸಿ.ಪಾಟೀಲ ಚರ್ಚೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2019, 20:17 IST
Last Updated 4 ಆಗಸ್ಟ್ 2019, 20:17 IST
   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹಿರೇಕೆರೂರು ಕ್ಷೇತ್ರದ ಕಾಂಗ್ರೆಸ್‌ನ ಅನರ್ಹ ಶಾಸಕ ಬಿ.ಸಿ.ಪಾಟೀಲ ಭಾನುವಾರ ಭೇಟಿಯಾಗಿ ಚರ್ಚಿಸಿದರು.

ತಮ್ಮ ಪುತ್ರಿ ಸೃಷ್ಟಿ ಪಾಟೀಲ ಅವರನ್ನೂ ಜತೆಯಲ್ಲಿ ಕರೆತಂದಿದ್ದರು.

ವಿಧಾನಸಭೆ ಉಪಚುನಾವಣೆ ಎದುರಾಗಿ, ಅಷ್ಟರಲ್ಲಿ ಕೋರ್ಟ್‌ನಲ್ಲಿ ಅನರ್ಹತೆ ವಿಚಾರ ನಿರ್ಧಾರ ಆಗದಿದ್ದರೆ ಏನು ಮಾಡಬೇಕು ಎಂಬ ಬಗ್ಗೆ ಚರ್ಚಿಸಿದ್ದಾರೆ. ಅನಿವಾರ್ಯವಾಗಿ ಸ್ಪರ್ಧಿಸಲು ಸಾಧ್ಯವಾಗದಿದ್ದರೆ ಪುತ್ರಿ ಸೃಷ್ಟಿಗೆ ಅವಕಾಶ ನೀಡುವಂತೆ ಬೇಡಿಕೆ ಸಲ್ಲಿಸಿದರು ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.