ADVERTISEMENT

ಪ್ರಮಾಣ ವಚನ ಸ್ವೀಕಾರಕ್ಕೆ ಸಿಎಂ ಬಿಎಸ್‌ವೈಯಿಂದ ಕರೆ ಬಂದಿದೆ: ಬಿ.ಸಿ ಪಾಟೀಲ್‌

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2020, 12:46 IST
Last Updated 5 ಫೆಬ್ರುವರಿ 2020, 12:46 IST
   

ಬೆಂಗಳೂರು: ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಗುರುವಾರ ರಾಜಭವನಕ್ಕೆಆಗಮಿಸುವಂತೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಕರೆ ಮಾಡಿ ಆಹ್ವಾನಿಸಿದ್ದಾರೆ ಎಂದು ಶಾಸಕ ಬಿ.ಸಿ ಪಾಟೀಲ್‌ ಟ್ವೀಟ್‌ ಮಾಡಿದ್ದಾರೆ.

ಈ ಕುರಿತು ಬುಧವಾರ ಟ್ವೀಟ್‌ ಮಾಡಿರುವ ಅವರು, ‘ಬುಧವಾರ ಸಂಜೆ 4.34 ಗಂಟೆಗೆ ಮಧುರ ಕ್ಷಣದಲ್ಲಿ ಕರೆ ಮಾಡಿದ ಬಿಎಸ್‌ ಯಡಿಯೂರಪ್ಪ ಅವರು ಬೆಳಿಗ್ಗೆ 10.30 ಕ್ಕೆ ಪ್ರಮಾಣ ವಚನ ಸ್ವೀಕಾರಕ್ಕೆ ಆಗಮಿಸಬೇಕೆಂದು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ 10.30 ಕ್ಕೆ ಕರ್ನಾಟಕ ಸರ್ಕಾರದ ಸಂಪುಟ ದರ್ಜೆಯ ಸಚಿವನಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದೇನೆ,’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಗುರುವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಯಾರ್ಯಾರು ಸಚಿವರಾಗಲಿದ್ದಾರೆ ಎಂಬುದು ಈ ವರೆಗೆ ಖಚಿತವಾಗಿಲ್ಲ. ಈ ನಡುವೇ ಬಿ.ಸಿ ಪಾಟೀಲ್‌ ಟ್ವೀಟ್‌ ಮಾಡಿ ತಮಗೆ ಸ್ಥಾನ ದೊರಕಿರುವುದನ್ನು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.