ADVERTISEMENT

ನಾನು ಬಿಜೆಪಿಗೆ ಹೋಗುತ್ತಿದ್ದೇನೆ ಎಂಬುದು ಸುಳ್ಳು: ಬಿ.ಸಿ.ಪಾಟೀಲ

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತನಾಡಿದ ಶಾಸಕ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2019, 5:41 IST
Last Updated 9 ಫೆಬ್ರುವರಿ 2019, 5:41 IST
   

ಬೆಂಗಳೂರು:ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾಗಿದ್ದ ಬಿ.ಸಿ ಪಾಟೀಲ ಅವರು ಸಿದ್ದರಾಮಯ್ಯ ಅವರನ್ನು ದಿಢೀರ್ ಭೇಟಿ ಮಾಡಿದರು.

ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಬೆಳಗ್ಗಿನ ಜಾವ ಭೇಟಿಯಾದ ಬಿ.ಸಿ.ಪಾಟೀಲ,ನಾನು ಬಿಜೆಪಿಗೆ ಹೋಗುತ್ತಿದ್ದೇನೆ ಎಂಬುದು ಸುಳ್ಳು. ಕಾಂಗ್ರೆಸ್ ಪಕ್ಷ ಬಿಟ್ಟು ಎಲ್ಲೂ ಹೋಗುವುದಿಲ್ಲ. ನಾನು ಮುಂಬೈನಲ್ಲಿ ರಮೇಶ್ ಜಾರಕಿಹೊಳಿ ಟೀಂ ಜೊತೆ ಇದ್ದೇನೆ ಎಂಬುದೆಲ್ಲ ಸುಳ್ಳು ಎಂದು ಮನವರಿಕೆ ಮಾಡಿಕೊಟ್ಟರು.

ದೆಹಲಿಗೆ ತೆರಳುವ ಮುನ್ನ ತಮ್ಮನ್ನು ಭೇಟಿ ಮಾಡಿದ ಪಾಟೀಲ ಅವರಿಗೆ ‘ಯಾವ ಕಾರಣಕ್ಕೂ ಆಪರೇಷನ್ ಕಮಲಕ್ಕೆ ಬಲಿಯಾಗಬೇಡಿ. ನಿಮ್ಮ ರಾಜಕೀಯ ಭವಿಷ್ಯವನ್ನು ಹಾಳು‌ ಮಾಡಿಕೊಳ್ಳಬೇಡಿ’ ಎಂದು ಸಿದ್ದರಾಮಯ್ಯ ಕಿವಿ ಮಾತು ಹೇಳಿದ್ದಾರೆ ಎಂದು ಗೊತ್ತಾಗಿದೆ.

ADVERTISEMENT

ಸಂಬಂಧಪಟ್ಟ ಸುದ್ದಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.